Update: July 2010
I came across this link recently. Chinmaya Mission has uploaded the detailed mantras for Sathyanarayana Pooja. here is the link.
Sathyanarayana Pooja Vidhana in Kannada(88 pages) - broken link is fixed
ನನ್ನ ಬ್ಲಾಗಿಗೆ ಬಂದ ಬಹಳಷ್ಟು ಜನರ ಕೋರಿಕೆಯ ಮೇರೆಗೆ ಶ್ರೀ ಸತ್ಯನಾರಾಯಣ ವ್ರತದ ಬಗ್ಗೆ ಬರೆಯುತ್ತಿದ್ದೀನಿ.
ಪೂಜಗೃಹ ಅಥವಾ ದೇವರು ಇಡುವ ಜಾಗವನ್ನು ಮಾವಿನ ಸೊಪ್ಪು ಬಾಳೆಕಂದು, ರಂಗೋಲಿಯಿಂದ ಅಲಂಕರಿಸಿ . ಒಂದು ಸಣ್ಣ ಚೊಂಬಿಗೆ ನಿಮ್ಮದೇ ವಡವೆ (ಸರ)ಹಾಕಿ, ಒಳಗೆ ಸ್ವಲ್ಪ ನೀರು ಹಾಕಿ, ಚೊಂಬಿನ ಬಾಯಿಗೆ 2 ವೀಳ್ಯದ ಎಲೆ ಇಟ್ಟು, ಮೇಲೆ ಒಂದು ತೆಂಗಿನಕಾಯಿಇಡಬೇಕು. ಒಂದು ಹೊಸ ಶಲ್ಯವನ್ನು ಈ ಕಳಶದ ಪಾತ್ರೆಯ ಸುತ್ತ ಹೊದಿಸಿ.ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರಮೇಲೆ ಈ ಕಲಶ ಸ್ಥಾಪನೆ ಮಾಡಬೇಕು. ಇದರೊಂದಿಗೆ ಇನ್ನೊಂದು ತಟ್ಟೆಯಲ್ಲಿ ನವಗ್ರಹ ಧಾನ್ಯಗಳನ್ನು ಸಣ್ಣ ದೊನ್ನೆಯಲ್ಲಿ ಇಡಬೇಕು. ಪ್ರತಿ ಧಾನ್ಯದ ಮೇಲೆ ಒಂದು ಹಣ್ಣು, ದಕ್ಷಿಣೆ ಇಡಬೇಕು.ಈ ಧಾನ್ಯಗಳನ್ನು ಸರಿಯಾದ ದಿಕ್ಕಿಗೆ ಇಡಬೇಕು.
ನವಗ್ರಹ ಧಾನ್ಯಗಳು ಮತ್ತು ನವಗ್ರಹ ಮಂಡಲದ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ. ಇದರ ಜೊತೆಗೆ ಸತ್ಯನಾರಾಯಣ ಪಟ ಇಟ್ಟು ಪೂಜೆ ಮಾಡಿ. ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಪಟ್ಟಿ ಇಲ್ಲಿದೆ.
ಮೊದಲು ಗಣಪತಿ ಪೂಜೆ ಮಾಡಬೇಕು . ನಂತರ ನವಗ್ರಹ ಪೂಜೆ ಮಾಡಿ, ಆಮೇಲೆ ಸತ್ಯನಾರಾಯಣನ ಪೂಜೆ ಮಾಡಬೇಕು. ಶ್ರೀ ಸತ್ಯನಾರಾಯಣ ಅಷ್ಟೋತ್ತರ ಇಲ್ಲಿದೆ. ಜೊತೆಗೆ ಲಕ್ಷ್ಮಿಅಷ್ಟೋತ್ತರ ಹೇಳಿ, ಲಕ್ಷ್ಮಿ ಪೂಜೆಯನ್ನು ಮಾಡಬೇಕು. ನೈವೇದ್ಯಕ್ಕೆ ಸಪಾತ ಭಕ್ಷ್ಯ/ಸಪಾದ ಭಕ್ಷ್ಯ(ಕೇಸರಿ ಭಾತ್ /ಸಜ್ಜಿಗೆ)ಮಾಡಿಕೊಳ್ಳಬೇಕು.ಸಪಾದ ಭಕ್ಷ್ಯ ಮಾಡುವ ವಿಧಾನ ಇಲ್ಲಿದೆ. ಇದನ್ನು ರವೆ, ಸಕ್ಕರೆ, ತುಪ್ಪ, ಹಾಲು, ಬಾಳೆಹಣ್ಣು ಉಪಯೋಗಿಸಿ ಮಾಡಬೇಕು. ಪೂಜೆಯ ನಂತರ ಕಥಾ ಶ್ರವಣ ಮಾಡಬೇಕು. ಸತ್ಯನಾರಾಯಣ ವ್ರತ ಕಥೆಯಲ್ಲಿ ೫ ಅಧ್ಯಾಯ ಇದೆ. ಕೆಲವರು ಪ್ರತಿ ಅಧ್ಯಾಯ ಮುಗಿದ ಮೇಲೆ ಮಂಗಳಾರತಿ ನೈವೇದ್ಯ ಮಾಡುತ್ತಾರೆ. ಪೂಜೆಯ ನಂತರ ಸತ್ಯನಾರಾಯಣ ಪ್ರಾಸದ ಸ್ವೀಕಾರ ಮಾಡಿ. ಪೂಜೆಗೆ ಇಟ್ಟಿರುವ ನವಧಾನ್ಯಗಳು, ಹೊದಿಸಿರುವ ಶಲ್ಯ ಮತ್ತು ದಕ್ಷಿಣೆಯನ್ನು ಸ ತ್ಪಾತ್ರರಿಗೆ ದಾನ ಕೊಡಬೇಕು.
ನಮ್ಮ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಿರುವ ಫೋಟೋ ಕೆಳಗಿದೆ ನೋಡಿ.
ವೇದ ಬ್ರಹ್ಮ ಶ್ರೀ ಗಣಪತಿ ಶಾಸ್ತ್ರಿಗಳು ಪೂಜಾ ಮಂತ್ರಗಳು ಮತ್ತು ವ್ರತ ಕಥೆ ಎರಡನ್ನೂ ಹೇಳಿದ್ದಾರೆ. ಸತ್ಯನಾರಾಯಣ ಪೂಜಾ ವಿಧಾನದ ಧ್ವನಿ ಮುದ್ರಣ ಇಲ್ಲಿ ಕೇಳಬಹುದು:


ಸತ್ಯನಾರಾಯಣನ ಮೇಲೆ ಹಾಡುಗಳು:
Related link
I came across this link recently. Chinmaya Mission has uploaded the detailed mantras for Sathyanarayana Pooja. here is the link.
Sathyanarayana Pooja Vidhana in Kannada(88 pages) - broken link is fixed
ನನ್ನ ಬ್ಲಾಗಿಗೆ ಬಂದ ಬಹಳಷ್ಟು ಜನರ ಕೋರಿಕೆಯ ಮೇರೆಗೆ ಶ್ರೀ ಸತ್ಯನಾರಾಯಣ ವ್ರತದ ಬಗ್ಗೆ ಬರೆಯುತ್ತಿದ್ದೀನಿ.

ಸತ್ಯನಾರಾಯಣ ವಿಷ್ಣುವಿನ ಒಂದು ರೂಪ. ಸತ್ಯನರಯಣನು ನವಗ್ರಹಗಳಿಗೆ ಅಧಿಪತಿ, ನವಗ್ರಹಗಳನ್ನು ನಿಯಂತ್ರಿಸುತ್ತಾನೆ. ನಮ್ಮ ನಕ್ಷತ್ರಕ್ಕೆ ಅನುಗುಣವಾಗಿ ಗ್ರಹಗತಿಗಳು ತಮ್ಮ ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಸತ್ಯನಾರಾಯಣನನ್ನು ಪೂಜಿಸಿದರೆ, ಗ್ರಹಗಳ ಕೆಟ್ಟ ಪ್ರಭಾವದಿಂದ ಪಾರು ಮಾಡಿ, ಎಲ್ಲ ಒಳ್ಳೆಯದಾಗುವಂತೆ ಅನುಗ್ರಹಿಸುತ್ತಾನೆ. ಆದ್ದರಿಂದ ಸತ್ಯನಾರಾಯಣ ವ್ರತವನ್ನು ಎಲ್ಲ ಶುಭ ಸಮಾರಂಭಗಳಲ್ಲಿ ಮಾಡುವ ಪದ್ಧತಿ ಇದೆ. ಮದುವೆ, ಗೃಹಪ್ರವೇಶ, ಹುಟ್ಟುಹಬ್ಬ, ಹೊಸ ಕೆಲಸ/ವ್ಯಾಪಾರ ಶುರು ಮಾಡುವ ಮುನ್ನ, ವಿದ್ಯಾಭ್ಯಾಸ/ಪರೀಕ್ಷೆಯ ಸಮಯ ಇತ್ಯಾದಿ ಸಂದರ್ಭಗಳಲ್ಲಿ ಈ ಪೂಜೆಯನ್ನು ಮಾಡುತ್ತಾರೆ. ತಮ್ಮ ಕಾರ್ಯಗಳಲ್ಲಿ ಯಶಸ್ಸು ಕೊಡು ಎಂದು ಪ್ರಾರ್ಥನೆ ಮಾಡುತ್ತಾರೆ.
ಸಾಮಾನ್ಯವಾಗಿ ಈ ವ್ರತವನ್ನು ಹುಣ್ಣಿಮೆ / ಪೂರ್ಣಿಮಾ ದಿನ ಮಾಡುತ್ತಾರೆ. ಇದಲ್ಲದೇ ನಿಮ್ಮ ಮನಸ್ಸಿಗೆ ಪೂಜೆ ಮಾಡಬೇಕುಎಂದು ಅನಿಸಿದರೆ, ಯಾವ ದಿನ ಬೇಕಾದರೂ ಈ ಪೂಜೆಯನ್ನು ಮಾಡಬಹುದು.
ಪೂಜಗೃಹ ಅಥವಾ ದೇವರು ಇಡುವ ಜಾಗವನ್ನು ಮಾವಿನ ಸೊಪ್ಪು ಬಾಳೆಕಂದು, ರಂಗೋಲಿಯಿಂದ ಅಲಂಕರಿಸಿ . ಒಂದು ಸಣ್ಣ ಚೊಂಬಿಗೆ ನಿಮ್ಮದೇ ವಡವೆ (ಸರ)ಹಾಕಿ, ಒಳಗೆ ಸ್ವಲ್ಪ ನೀರು ಹಾಕಿ, ಚೊಂಬಿನ ಬಾಯಿಗೆ 2 ವೀಳ್ಯದ ಎಲೆ ಇಟ್ಟು, ಮೇಲೆ ಒಂದು ತೆಂಗಿನಕಾಯಿಇಡಬೇಕು. ಒಂದು ಹೊಸ ಶಲ್ಯವನ್ನು ಈ ಕಳಶದ ಪಾತ್ರೆಯ ಸುತ್ತ ಹೊದಿಸಿ.ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರಮೇಲೆ ಈ ಕಲಶ ಸ್ಥಾಪನೆ ಮಾಡಬೇಕು. ಇದರೊಂದಿಗೆ ಇನ್ನೊಂದು ತಟ್ಟೆಯಲ್ಲಿ ನವಗ್ರಹ ಧಾನ್ಯಗಳನ್ನು ಸಣ್ಣ ದೊನ್ನೆಯಲ್ಲಿ ಇಡಬೇಕು. ಪ್ರತಿ ಧಾನ್ಯದ ಮೇಲೆ ಒಂದು ಹಣ್ಣು, ದಕ್ಷಿಣೆ ಇಡಬೇಕು.ಈ ಧಾನ್ಯಗಳನ್ನು ಸರಿಯಾದ ದಿಕ್ಕಿಗೆ ಇಡಬೇಕು.
ನವಗ್ರಹ ಧಾನ್ಯಗಳು ಮತ್ತು ನವಗ್ರಹ ಮಂಡಲದ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ. ಇದರ ಜೊತೆಗೆ ಸತ್ಯನಾರಾಯಣ ಪಟ ಇಟ್ಟು ಪೂಜೆ ಮಾಡಿ. ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಪಟ್ಟಿ ಇಲ್ಲಿದೆ.
ನವಧಾನ್ಯ
ಮೊದಲು ಗಣಪತಿ ಪೂಜೆ ಮಾಡಬೇಕು . ನಂತರ ನವಗ್ರಹ ಪೂಜೆ ಮಾಡಿ, ಆಮೇಲೆ ಸತ್ಯನಾರಾಯಣನ ಪೂಜೆ ಮಾಡಬೇಕು. ಶ್ರೀ ಸತ್ಯನಾರಾಯಣ ಅಷ್ಟೋತ್ತರ ಇಲ್ಲಿದೆ. ಜೊತೆಗೆ ಲಕ್ಷ್ಮಿಅಷ್ಟೋತ್ತರ ಹೇಳಿ, ಲಕ್ಷ್ಮಿ ಪೂಜೆಯನ್ನು ಮಾಡಬೇಕು. ನೈವೇದ್ಯಕ್ಕೆ ಸಪಾತ ಭಕ್ಷ್ಯ/ಸಪಾದ ಭಕ್ಷ್ಯ(ಕೇಸರಿ ಭಾತ್ /ಸಜ್ಜಿಗೆ)ಮಾಡಿಕೊಳ್ಳಬೇಕು.ಸಪಾದ ಭಕ್ಷ್ಯ ಮಾಡುವ ವಿಧಾನ ಇಲ್ಲಿದೆ. ಇದನ್ನು ರವೆ, ಸಕ್ಕರೆ, ತುಪ್ಪ, ಹಾಲು, ಬಾಳೆಹಣ್ಣು ಉಪಯೋಗಿಸಿ ಮಾಡಬೇಕು. ಪೂಜೆಯ ನಂತರ ಕಥಾ ಶ್ರವಣ ಮಾಡಬೇಕು. ಸತ್ಯನಾರಾಯಣ ವ್ರತ ಕಥೆಯಲ್ಲಿ ೫ ಅಧ್ಯಾಯ ಇದೆ. ಕೆಲವರು ಪ್ರತಿ ಅಧ್ಯಾಯ ಮುಗಿದ ಮೇಲೆ ಮಂಗಳಾರತಿ ನೈವೇದ್ಯ ಮಾಡುತ್ತಾರೆ. ಪೂಜೆಯ ನಂತರ ಸತ್ಯನಾರಾಯಣ ಪ್ರಾಸದ ಸ್ವೀಕಾರ ಮಾಡಿ. ಪೂಜೆಗೆ ಇಟ್ಟಿರುವ ನವಧಾನ್ಯಗಳು, ಹೊದಿಸಿರುವ ಶಲ್ಯ ಮತ್ತು ದಕ್ಷಿಣೆಯನ್ನು ಸ ತ್ಪಾತ್ರರಿಗೆ ದಾನ ಕೊಡಬೇಕು.
ನಮ್ಮ ಮನೆಯಲ್ಲಿ ಸತ್ಯನಾರಾಯಣ ಪೂಜೆ ಮಾಡಿರುವ ಫೋಟೋ ಕೆಳಗಿದೆ ನೋಡಿ.
ವೇದ ಬ್ರಹ್ಮ ಶ್ರೀ ಗಣಪತಿ ಶಾಸ್ತ್ರಿಗಳು ಪೂಜಾ ಮಂತ್ರಗಳು ಮತ್ತು ವ್ರತ ಕಥೆ ಎರಡನ್ನೂ ಹೇಳಿದ್ದಾರೆ. ಸತ್ಯನಾರಾಯಣ ಪೂಜಾ ವಿಧಾನದ ಧ್ವನಿ ಮುದ್ರಣ ಇಲ್ಲಿ ಕೇಳಬಹುದು:



ಸತ್ಯನಾರಾಯಣನ ಮೇಲೆ ಹಾಡುಗಳು:
- ಶ್ರೀ ಸತ್ಯನಾರಾಯಣಂ - ದೀಕ್ಷಿತರ ಕೃತಿ , Sankaran Namboodiri ಅವರ ಧ್ವನಿಯಲ್ಲಿ ಕೇಳಿ.
- ಕಾಪಾಡು ಶ್ರೀ ಸತ್ಯ ನಾರಾಯಣ - ಕನ್ನಡ ಚಲನಚಿತ್ರ 'ದಾರಿ ತಪ್ಪಿದ ಮಗ ' ದಲ್ಲಿರುವ ಜನಪ್ರಿಯ ಹಾಡು
- ಸತ್ಯನಾರಾಯಣ ಆರತಿ - ಇದು ಜನಪ್ರಿಯವಾದ ಹಿಂದಿ ಆರತಿ ಹಾಡು.
Related link







